Savistara Kannada News

Latest Post

 



ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರ‌ ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೇ 21ಮಂಗಳವಾರ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.



ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ ಮೂಲಕ ಗುರುವಾಯನಕೆರೆಗೆ ಬಂದು ಇಲ್ಲಿನ ಎಫ್.ಎಂ ಗಾರ್ಡನ್ ನಲ್ಲಿ ನಡೆಯುವ ದಿ ಕೆ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ.

 



ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ.



ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು, ಸದರಿ ಪರೀಕ್ಷೆ-2ನ್ನು ಮುಂದೂಡಿ ದಿನಾಂಕ14-06-2024 ರಿಂದ 22-06-2024ರವರೆಗೆ ನಡೆಸಲು ತೀರ್ಮಾನಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ

-ದಿನಾಂಕ 14-06-2024ರ ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್ ಸಿಇಆರ್ ಟಿ), ಸಂಸ್ಕೃತ.

-ದಿನಾಂಕ 15-06-2024ರ ಶನಿವಾರ- ತೃತೀಯ ಭಾಷೆ – ಹಿಂದಿ( ಎನ್ ಸಿ ಇ ಆರ್ ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.

ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್

-ದಿನಾಂಕ 19-06-2024ರ ಬುಧವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿರಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI C, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ.

-ದಿನಾಂಕ 20-06-2024ರ ಗುರುವಾರ- ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ.

-ದಿನಾಂಕ 21-06-2024ರ ಶುಕ್ರವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ

-ದಿನಾಂಕ 22-06-2024ರ ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.

 


ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ ಮರುಕ್ಷಣವೇ ಅಗ್ನಿಪಥ ಯೋಜನೆ ಯನ್ನು ಮೊಟಕುಗೊಳಿಸಿ ಕಸದ ಬುಟ್ಟಿಗೆ ಎಸೆಯಲಾಗುವುದೆಂದು ರಾಹುಲ್ ಗಾಂಧಿ ದೆಹಲಿ ಚುನಾವಣೆ ಪ್ರಚಾರ ಸಂದರ್ಭದಲ್ಲಿ ತಿಳಿಸಿದ್ದಾರೆ. ಜಿ ಯಸ್ ಟಿ ಸರಳಿಕರಣಗೊಳಿಸಿ ಮತ್ತು ಬೃಹತ್ ಉದ್ದಿಮೆದಾರರ ಬದಲಿಗೆ ಸಣ್ಣ ಉದ್ದಿಮೆದಾರರಿಗೆ ನೆರವು ನೀಡಲಾಗುವುದು ಪ್ರಧಾನಿ ಮೋದಿ ನೇರವಾಗಿ ನಮ್ಮ ಜೊತೆ ಚರ್ಚೆ ಮಾಡಲು ಬರುತ್ತಿಲ್ಲ,ದೇಶ ಅಂಬಾನಿ, ಅದಾನಿ ಕೈಲಿದೆಯೆಂದು ವಾಗ್ದಾಳಿ ನಡೆಸಿದರು.

 



ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಕಟ್ಟು ನಿಟ್ಟಾದ ನಿಯಮಗಳು ಈಗಲೂ ಜಾರಿಯಲ್ಲಿದೆ,ಮದ್ಯಪಾನ ಕುರಿತಾಗಿ ನಿಷೇಧ ಕೂಡ ಹೇರಿದೆ,ಕಳೆದ ಫಿಫಾ ಫುಟ್ಬಾಲ್ ಪಂದ್ಯಾಟ ಅರೇಬಿಕ್ ರಾಷ್ಟ್ರ ಗಳಲ್ಲಿ ನಡೆದಾಗ ಮದ್ಯ ದ ವಿಚಾರದಲ್ಲಿ ತನ್ನ ಸಾಂಪ್ರದಾಯಿಕ ನಿಯಮಗಳಿಗೆ ಒತ್ತು ನೀಡಿ ಅವಕಾಶ ನೀಡಿರಲಿಲ್ಲ.ಯುಎಇ ತನ್ನ ಮದ್ಯ ನೀತಿಯಲ್ಲಿ ಬದಲಾವಣೆ ತಂದಿದ್ದು ದೇಶದಲ್ಲಿ ಮದ್ಯ ತಯಾರಿಕೆಗೆ ಒಪ್ಪಿಗೆ ನೀಡಿದೆ,ಈ ಹಿನ್ನಲೆಯಲ್ಲಿ ಮೊದಲ ಚಾಡ್ ಮ್ಯಾಕ್ ಇ ಬಿಯರ್ ಅಂಗಡಿ ತೆರೆಯಲಾಗಿದೆ.ಈ ಮೊದಲು ಮದ್ಯ ಮಾರಾಟಕ್ಕೆ ಅವಕಾಶ ವಿತ್ತದರು ತಯಾರಿಸುವಂತಿಲ್ಲ,ಪ್ರವಾಸಿಗರನ್ನು ತನ್ನತ್ತ ಸೆಳೆಯಲು ಬೇಡಿಕೆ ಹಿನ್ನಲೆಯಲ್ಲಿ ಮದ್ಯ ನೀತಿ ನಿಯಮಗಳಲ್ಲಿ ಬದಲಾವಣೆ ಮಾಡಿ ಸರ್ಕಾರ ಈ ಕ್ರಮ ಕೈಗೊಂಡಿದೆ.

 



ನಮ್ಮ ಬಣವನ್ನು ಪ್ರಧಾನಿ ಮೋದಿ ನಕಲಿ ಶಿವಸೇನೆಯೆಂದು ಕರೆದಿದ್ದು ಆದರೆ ಮೋದಿ ಆರೆಸ್ಸೆಸ್ ನ್ನು ನಿಷೇಧಿಸುವ ದಿನಗಳು ದೂರವಿಲ್ಲವೆಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು,ನಂತರ ದೇಶದಲ್ಲಿ ಅಚ್ಛೆ ದಿನ್ ಪ್ರಾರಂಭವಾಗಲಿದೆ ಯೆಂದು ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

 



ಸಿಂಗಾಪುರ ದಲ್ಲಿ ಕೋವಿಡ್ 19 ಅಲೆ ಶುರುವಾಗಿದ್ದು,ಮಾಸ್ಕ್ ಕಡ್ಡಾಯಗೊಳಿಸಿದೆ.ಮೇ 5 ರಿಂದ 11 ರವರೆಗೆ 26 ಸಾವಿರ ಜನಕ್ಕೆ ಕೋವಿಡ್ ಸೋಂಕು ದೃಢಪಟ್ಟಿದೆ.ಕೋವಿಡ್ ಹೊಸ ಅಲೆ ಆರಂಭಿಕ ಭಾಗದಲ್ಲಿದ್ದು ಜೂನ್ ಕೊನೆಯ ವೇಳೆಗೆ ವ್ಯಾಪಕವಾಗಲಿದೆಯೆಂದು ಸಿಂಗಾಪುರ ಆರೋಗ್ಯ ಸಚಿವಾಲಯ ತಿಳಿಸಿದೆ.ಕೋವಿಡ್ 19 ರೂಪಾಂತರಿ ಜೆ ಎನ್ 1 ಮತ್ತು ಅದರ ಉಪತಳಿ ಕೆಪಿ 1 ಕಾಣಿಸುಕೊಳ್ಳುತ್ತಿದ್ದು ಇವು ಹೆಚ್ಚು ರೂಪಾಂತರಗೊಂಡ ಪರಿಣಾಮ ತೀವ್ರವಾದ ಆರೋಗ್ಯ ಸಮಸ್ಯೆಯ ಸೂಚನೆಗಳಿಲ್ಲವೆಂದು ಸಿಂಗಾಪುರ ಸರ್ಕಾರ ಸ್ಪಷ್ಟಪಡಿಸಿದೆ.

 



ಚೆನ್ನೈ ಸೂಪರ್ ಕಿಂಗ್ ಮತ್ತು ರಾಯಲ್ ಚಾಲೆಂಜರ್ಸ್  ಬೆಂಗಳೂರು ನಡುವೆ ನಿನ್ನೆ ಬೆಂಗಳೂರು ಲ್ಲಿ ನಡೆದ ಪಂದ್ಯಾಟದಲ್ಲಿ  ರಾಯಲ್ ಚಾಲೆಂಜರ್ಸ್ ಸಿಯಸ್ ಕೆ ತಂಡವನ್ನು 27 ರನ್ನುಗಳಿಂದ ಸೋಲಿಸಿ ಪ್ಲೇ ಆಫ್ ಪ್ರವೇಶ ಪಡೆದುಕೊಂಡಿದೆ.ಬೆಂಗಳೂರು ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಗೆ 218 ರನ್ ಗಳಿಸಿತು ಗುರಿ ಬೆನ್ನೆಟ್ಟಿದ ಚೆನ್ನೈ 20 ಓವರ್ ಏಳು ವಿಕೆಟ್ ಗೆ 191 ರನ್ ಗಳಿಸಿ ಸೋಲು ಅನುಭವಿಸಿತು.ಆರು ಪಂದ್ಯಗಳಲ್ಲಿ ನಿರಂತರವಾಗಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಫಿನಿಕ್ಸ್ ನಂತೆ  ಪ್ಲೇ ಆಫ್ ಅರ್ಹತೆ ಪಡೆದಿದೆ.

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget