ಸುಳ್ಯ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಸುಳ್ಯ ಮಂಡಲ ಕಾರ್ಯಕರ್ತರ ಸಮಾವೇಶ ಸುಳ್ಯ ಕೇರ್ಪಳದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಮಾ.29ರಂದು ನಡೆಯಿತು. ಸಮಾವೇಶವನ್ನು ಉದ್ಘಾಟಿಸಿದ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಪ್ರತಾಪಸಹ ನಾಯಕ್, ಮಾಜಿ ಸಚಿವ ಎಸ್.ಅಂಗಾರ, ಸುಳ್ಯ ಮಂಡಲ ಉಸ್ತುವಾರಿಗಳಾದ ಅಪ್ಪಯ್ಯ ಮಣಿಯಾಣಿ, ಸೀತಾರಾಮ ಬೆಳಾಲು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ
ಯತೀಶ್ ಆರ್ವಾರ್, ಕಿಶೋರ್ ಕುಮಾರ್ ಬೊಟ್ಯಾಡಿ, ಕಾರ್ಯದರ್ಶಿ ವಿನಯಕುಮಾರ್ ಮುಳುಗಾಡು, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ದೇವದಾಸ ಶೆಟ್ಟಿ,ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾದ ಹರೀಶ್ ಕಂಜಿಪಿಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಅಂಗಾರ ಮಾತನಾಡಿ, ಸುಳ್ಯ ತಾಲೂಕಿನ ಸಂಘಟನಾತ್ಮಕ ಶಕ್ತಿ ಮತ್ತೊಮ್ಮೆ ತೋರ್ಪಡಿಸುವ ಸಮಯ ಬಂದಿದೆ,ಹೆಚ್ಚಿನ ಅಂತರದಿಂದ ಮತ್ತೊಮ್ಮೆ ಬಿಜೆಪಿ ಯನ್ನು ಗೆಲ್ಲಿಸೋಣ ಎಂದು ಹೇಳಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಪ್ರತಿ ಕಾರ್ಯಕರ್ತರು ತಮ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಲೀಡ್ ದೊರಕಿಸುವಂತೆ ಕಾರ್ಯ ನಿರ್ವಹಿಸಬೇಕೆಂದರು ಆ ಮೂಲಕ ನರೇಂದ್ರ ಮೋದಿ ಯವರಿಗೆ ಶಕ್ತಿ ತುಂಬುವಂತೆ ಕರೆ ನೀಡಿದರು.15 ವರ್ಷ ಕ್ಷೇತ್ರದಲ್ಲಿ ಅವಕಾಶ ನೀಡಿರುವಿರಿ ನನ್ನ ನಡೆ,ನುಡಿಯಲ್ಲಿ ತಪ್ಪು ನಡೆದಿದ್ದರೆ ಕಾರ್ಯಕರ್ತರಲ್ಲಿ ಕ್ಷಮೆ ಕೋರುತ್ತೆನೆಂದರು.
ಬಿ ಜೆ ಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮಾತಾನಾಡಿ ಸುಳ್ಯ ಕ್ಷೇತ್ರ ದೇಶ ಮಟ್ಟದಲ್ಲಿ ಬಿಜೆಪಿ ಗೆ ಆದರ್ಶ ದ ಕ್ಷೇತ್ರ,ಸಂಘಟನಾತ್ಮಕ ಈ ನೆಲ ದಲ್ಲಿ ಮತ್ತೊಮ್ಮೆ ಬಿಜೆಪಿ ಯನ್ನು ಗೆಲ್ಲಿಸೋಣ,1837 ಬ್ರಿಟಿಷರ ವಿರುದ್ಧ ಹೋರಾಟ ದಲ್ಲಿ ಸುಳ್ಯ ದ ಮಹಾ ಪುರುಷರ ಆ ತ್ಯಾಗ ನಮಗೆ ಪ್ರೇರಣೆ,ಕುರುಂಜಿ ವೆಂಕಟ್ರಮಣ ಗೌಡರಂತ ಹಿರಿಯರು ಶಿಕ್ಷಣ ಕ್ರಾಂತಿ ಮೂಲಕ ಸುಳ್ಯವನ್ನು ಗುರುತಿಸುವಂತೆ ಮಾಡಿದ್ದಾರೆ,ಹಳದಿ ರೋಗ ದ ಬಗ್ಗೆ ಮುಂದಿನ ಡಿನಗಳಲ್ಲಿ ಗಂಭಿರವಾದ ಪ್ರಯತ್ನವನ್ನು ಮಾಡುತ್ತೇನೆಂದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಿಳಿಸಿದರು.
ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ಸ್ವಾಗತಿಸಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ವಂದಿಸಿದರು.
ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ.ಕಾರ್ಯಕ್ರಮ ನಿರೂಪಿಸಿದರು.